News Karnataka
ಸಿಟಿಜನ್ ಕಾರ್ನರ್

ಔರಾದ ಪಟ್ಟಣದಲ್ಲಿ ನಾಳೆ ರೇಣುಕಾಚಾರ್ಯರ ಜಯಂತಿ ಆಚರಣೆ

Renukacharya Jayanti to be celebrated tomorrow in Aurad town
Photo Credit : Ravi Mathapati

ಔರಾದ: ತಾಲೂಕು ವೀರಶೈವ ಸಮಾಜ ಒಕ್ಕೂಟವು ಮಾರ್ಚ್ 15ರಂದು ಔರಾದ ಪಟ್ಟಣದಲ್ಲಿ ಅದ್ದೂರಿಯಾಗಿ ಜಗದ್ಗುರು ಶ್ರೀ ರೇಣುಕಾಚಾರ್ಯರ ಜಯಂತಿ ಆಚರಿಸಲಾಗುವುದು, ಪ್ರಯುಕ್ತ ಎಲ್ಲ ಸಮಾಜ ಬಾಂಧವರು ತನು ಮನ ಧನ ಸೇವೆಯ ಮೂಲಕ ಜಗದ್ಗುರು ರೇಣುಕಾಚಾರ್ಯ ಜಯಂತಿಯ ಆಚರಣೆಯಲ್ಲಿ ಪಾಲ್ಗೊಳ್ಳಬೇಕೆಂದು ಹಣೇಗಾಂವ ಶ್ರೀ ಶಂಕರಲಿಂಗ ಶಿವಾಚಾರ್ಯ ಸ್ವಾಮೀಜಿ ಹೇಳಿದರು.

ಪಟ್ಟಣದಲ್ಲಿ ಮಾತನಾಡಿದ ಅವರು ಮಾನವ ಧರ್ಮಕ್ಕೆ ಜಯವಾಗಲಿ ಧರ್ಮದಿಂದಲೆ ವಿಶ್ವಕ್ಕೆ ಶಾಂತಿ ಎಂದು ಭೋದಿಸಿದ ಜಗದ್ಗುರು ಶ್ರೀ ರೇಣುಕಾಚಾರ್ಯರ ಜಯಂತಿ ಆಚರಣೆಯನ್ನು ಇದೇ ಮೊದಲ ಬಾರಿಗೆ ಸರ್ಕಾರ ಆಚರಣೆ ಮಾಡಿದ್ದು ಸಂತಸದ ವಿಷಯವಾಗಿದೆ. ಔರಾದ ತಾಲೂಕು ವೀರಶೈವ ಸಮಾಜದ ವತಿಯಿಂದ ಮಾ. 15ರಂದು ಬುಧವಾರ ಸಾಯಂಕಾಲ 5 ಗಂಟೆಗೆ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಜಯಂತಿ ಆಚರಣೆ ಕಾರ್ಯಕ್ರಮ ಆಯೋಜಿಸಲಾಗಿದೆ.

ಕಾರ್ಯಕ್ರಮಕ್ಕೂ ಮುನ್ನ ಪಟ್ಟಣದ ಕನ್ನಡಾಂಬೆ ವೃತ್ತದಲ್ಲಿ ಸಾಯಂಕಾಲ ನಾಲ್ಕು ಗಂಟೆಗೆ ಜಗದ್ಗುರು ರೇಣುಕಾಚಾರ್ಯರ ಭಾವಚಿತ್ರದ ಭವ್ಯ ಮೆರವಣಿಗೆ ನಡೆಯಲಿದ್ದು ಪಟ್ಟಣದ ಮುಖ್ಯ ರಸ್ತೆಯ ಮೂಲಕ ಬಸವೇಶ್ವರ ವೃತ್ತದಲ್ಲಿ ತಲುಪಲಿದೆ. ತದ ನಂತರ ವೇದಿಕೆ ಜರುಗಲಿದೆ ಪ್ರಯುಕ್ತ ಎಲ್ಲ ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.

Ravi Mathapati

Read More Articles
MANY DROPS MAKE AN OCEAN
Support NewsKarnataka's quality independent journalism with a small contribution.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *