News Karnataka
ಸಿಟಿಜನ್ ಕಾರ್ನರ್

ವಡಗಾಂವ ದೇ ಗ್ರಾಮದಲ್ಲಿ ವೀರಭದ್ರೇಶ್ವರರ ಜಾತ್ರಾ ಮಹೋತ್ಸವ

Veerabhadreswara's Jatra Mahotsava at Vadgaon De village
Photo Credit : by Author

ಔರಾದ: ತಾಲೂಕಿನ ವಡಗಾಂವ ದೇ ಗ್ರಾಮದಲ್ಲಿ ವೀರಭದ್ರೇಶ್ವರರ ಜಾತ್ರಾ ಮಹೋತ್ಸವ ಜ.19 ಮತ್ತು 20 ರಂದು ಅದ್ದೂರಿಯಾಗಿ ನಡೆಯಲಿದೆ ಎಂದು ವೀರಭದ್ರೇಶ್ವರ ದೇವಸ್ಥಾನದದ ಕಮಿಟಿ ವಡಗಾಂವ ದೇ ಅಧ್ಯಕ್ಷ ಬಸವರಾಜ ದೇಶಮುಖ ತಿಳಿಸಿದ್ದಾರೆ.

ಗ್ರಾಮದ ವೀರಭದ್ರೇಶ್ವರ ಮಂದಿರದಲ್ಲಿ ಜನವರಿ 19ರಂದು ಬೆಳಗ್ಗೆ 9 ಗಂಟೆಗೆ ರುದ್ರಾಭಿಷೇಕ, ರಾತ್ರಿ 8 ಗಂಟೆಗೆ ಗ್ರಾಮದ ಭಜನೆ ಮಂಡಳಿ ವತಿಯಿಂದ ಭಜನೆ, ವಚನ ಗಾಯನ ಕಾರ್ಯಕ್ರಮ ಜರುಗಲಿದೆ. 20 ರಂದು ಬೆಳಗ್ಗೆ 5.30ಕ್ಕೆ ಪಲ್ಲಕ್ಕಿ ಉತ್ಸವ, 9 ಗಂಟೆಗೆ ಅಗ್ನಿ ಪ್ರವೇಶ ನಂತರ ಮಹಾ ಪ್ರಸಾದ. ಅಂದು ಸಂಜೆ 5:30 ಗಂಟೆಗೆ ಅದ್ದೂರಿಯಾಗಿ ರಥೋತ್ಸವ ಕಾರ್ಯಕ್ರಮ ಜರುಗಲಿವೆ.

ವೀರಭದ್ರೇಶ್ವರ ಜಾತ್ರಾ ಮಹೋತ್ಸವಕ್ಕೆ ಸದ್ಭಕ್ತರು ಸಹಸ್ರ ಸಹಸ್ರ ಸಂಖ್ಯೆಯಲ್ಲಿ ಆಗಮಿಸಿ ತನು-ಮನ ಧನದಿಂದ ಸೇವೆ ಸಲ್ಲಿಸಿ, ವೀರಭದ್ರೇಶ್ವರ ದೇವರ ದರ್ಶನ ಆಶೀರ್ವಾದ ಪಡೆದು ಪುನೀತರಾಗಬೇಕೆಂದು ಶ್ರೀ ವೀರಭದ್ರೇಶ್ವರ ದೇವಸ್ಥಾನ ಕಮಿಟಿಯ ಅಧ್ಯಕರಾದ ಬಸವರಾಜ ದೇಶಮುಖ ಮನವಿ ಮಾಡಿದರು.

Ravi Mathapati

Read More Articles
MANY DROPS MAKE AN OCEAN
Support NewsKarnataka's quality independent journalism with a small contribution.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *