News Karnataka
ರಾಜಕೀಯ

ಸಚಿವ ಪ್ರಭು ಚವ್ಹಾಣ ಗ್ರಾಮ ಸಂಚಾರ

Minister Prabhu Chavan's village tour
Photo Credit : Ravi Mathapati

ಔರಾದ : ಪಶು ಸಂಗೋಪನೆ ಸಚಿವ ಪ್ರಭು.ಬಿ ಚವ್ಹಾಣ ಅವರು ಕಮಲನಗರ ತಾಲ್ಲೂಕಿನ ಹಲವು ಗ್ರಾಮಗಳಲ್ಲಿ ಸಂಚರಿಸಿ ಕಾರ್ಯಕರ್ತರು ಹಾಗೂ ಸಾರ್ವಜನಿಕರನ್ನು ಭೇಟಿಯಾದರು.

ಶಿವಪುರ, ಮುರ್ಕಿ, ಮುರ್ಕಿವಾಡಿ, ಹಕ್ಯಾಳ, ಖತಗಾಂವ, ಹೊಳಸಮುದ್ರ, ಸಾವಳಿ, ಸಂಗಮ್, ಬಳತ್(ಬಿ), ಬಳತ್(ಕೆ), ಹಾಲಹಳ್ಳಿ, ಚಾಂದೋರಿ, ತಪಸ್ಯಾಳ, ಬಸನಾಳ, ಕೋರ್ಯಾಳ ಹಾಗೂ ಮತ್ತಿತರೆ ಹಳ್ಳಿಗಳಲ್ಲಿ ಸಚಿವರು ಗ್ರಾಮ ಸಂಚಾರ ನಡೆಸಿದರು. ಸಚಿವರು ಭೇಟಿ ನೀಡಿದ ಗ್ರಾಮಗಳಲ್ಲಿ ಸ್ಥಳೀಯರು ಪಟಾಕಿ ಸಿಡಿಸಿ ಸಂಭ್ರಮಿಸಿದರು. ಕೆಲವೆಡೆ ಮಹಿಳೆಯರು ತಲೆಯ ಮೇಲೆ ಕಳಸ ಹೊತ್ತು, ಆರತಿ ಬೆಳಗಿ ಸಚಿವರನ್ನು ಗ್ರಾಮಕ್ಕೆ ಬರಮಾಡಿಕೊಂಡರು. ಬಳಿಕ ಕಾರ್ಯಕರ್ತರನ್ನು ಭೇಟಿಯಾಗಿ ಪಕ್ಷ ಸಂಘಟನೆಯ ಕುರಿತು ಚರ್ಚಿಸಲಾಯಿತು.

ಸಚಿವ ಪ್ರಭು ಚವ್ಹಾಣ ಮಾತನಾಡಿ, ನಾನು ನಾಲ್ಕು ಲಕ್ಷ ಜನತೆಯ ಸೇವಕನಾಗಿ ಕೆಲಸ ಮಾಡುತ್ತಿದ್ದೇನೆ. ಜನರ ಸುಃಖ-ದುಃಖಗಳಲ್ಲಿ ಭಾಗಿಯಾಗುತ್ತಿದ್ದೇನೆ‌. ಅಭಿವೃದ್ಧಿ ವಿಷಯವಾಗಿ ಜನರ ಎಲ್ಲ ಬೇಕು ಬೇಡಿಕೆಗಳನ್ನು ಈಡೇರಿಸಲು ಪ್ರಮಾಣಿಕ ಪ್ರಯತ್ನ ಮಾಡುತ್ತಿದ್ದೇನೆ. ತಮ್ಮ ಪ್ರೀತಿ ವಿಶ್ವಾಸ ಸದಾ ನನ್ನ ಮೇಲಿರಬೇಕು ಎಂದು ಕೋರಿದರು.

ಈ ಸಂದರ್ಭದಲ್ಲಿ ಮುಖಂಡರಾದ ವಸಂತ ಬಿರಾದಾರ, ಸುರೇಶ ಭೋಸ್ಲೆ, ರಾಮಶೆಟ್ಟಿ ಪನ್ನಾಳೆ, ಶರಣಪ್ಪ ಪಂಚಾಕ್ಷರಿ, ಕಿರಣ ಪಾಟೀಲ, ದೊಂಡಿಬಾ ನರೋಟೆ, ಶಿವಾನಂದ ವಡ್ಡೆ, ಬಂಟಿ ರಾಂಪೂರೆ ಸೇರಿದಂತೆ ಇತರರಿದ್ದರು.

Ravi Mathapati

Read More Articles
MANY DROPS MAKE AN OCEAN
Support NewsKarnataka's quality independent journalism with a small contribution.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *