News Karnataka
ರಾಜಕೀಯ

ಪ್ರಜಾಪ್ರಭುತ್ವ ಬಲಿಷ್ಠಗೊಳಿಸುವಲ್ಲಿ ಮತದಾನದ ಪಾತ್ರ ಪ್ರಮುಖ

Voting has an important role to play in strengthening democracy
Photo Credit : Ravi Mathapati

ಔರಾದ್: ಪ್ರಜಾಪ್ರಭುತ್ವ ಬಲಿಷ್ಟಗೊಳಿಸುವಲ್ಲಿ ಮತದಾನವು ಪ್ರಮುಖ ಪಾತ್ರ ವಹಿಸಲಿದ್ದು ಪ್ರತಿಯೊಬ್ಬ ಅರ್ಹ ಮತದಾರರು ತಪ್ಪದೇ ತಮ್ಮ ಮತ ಚಲಾಯಿಸಬೇಕು ಎಂದು ಮತಗಟ್ಟೆ ಸೆಕ್ಟರ್ ಅಧಿಕಾರಿ ರಾಜೇಂದ್ರ ತಿಳಿಸಿದರು.

ತಾಲೂಕಿನ ನಾಗುರ್ (ಎಂ)ದಲ್ಲಿ , ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸ್ವೀಪ್ ಸಮಿತಿ ಹಾಗೂ ತಹಶೀಲ್ದಾರ ಕಚೇರಿಯ ವತಿಯಿಂದ ವಿ.ವಿ. ಪ್ರಾತ್ಯಕ್ಷಿಕೆಯನ್ನು ಗ್ರಾಮದ ಸಾರ್ವಜನಿಕರಿಗೆ ಮತಯಂತ್ರದ ಬಳಕೆ ಕುರಿತು ಪ್ರಾತ್ಯಕ್ಷಿಕೆಯನ್ನು ಸಾರ್ವಜನಿಕರಿಗೆ ಪ್ರಸ್ತುತಪಡಿಸಿ ಮಾತನಾಡಿದ ಅವರು, ಅರ್ಹ ಮತದಾರರು ಚಲಾಯಿಸುವ ಮತವು ಚಲಾಯಿಸಿದ ಪಕ್ಷ ಅಥವಾ ವ್ಯಕ್ತಿಗೆ ದಾಖಲಾದ ಬಗ್ಗೆ ಖಾತರಿಪಡಿಸಿಕೊಳ್ಳಲು ವಿ.ವಿ.ಪ್ಯಾಟ ಯಂತ್ರ ಸಹಾಯವಾಗಲಿದೆ ಎಂದರು.

ವಿಧಾನಸಭಾ ಚುನಾವಣೆಯಲ್ಲಿ ವಿದ್ಯುನ್ಮಾನ ಮತಯಂತ್ರದ ಮೂಲಕ ಮತ ಚಲಾಯಿಸಲು ಅನುಕೂಲವಾಗುತ್ತಿದೆ ಎಂದರು. ವಿದ್ಯುನ್ಮಾನ ಮತಯಂತ್ರದ ಬಳಕೆಯ ಪ್ರತಿ ಹಂತಗಳನ್ನು ವಿವರಿಸಿ ಪ್ರಾತ್ಯಕ್ಷಿಕೆಯನ್ನು ಸಾದರಪಡಿಸಿದರು.

ಚಿಂತಾಕಿ ವಲಯ ಕಂದಾಯ ಅಧಿಕಾರಿ ಬಾಬುರಾವ್ ಮೇತ್ರೆ ಮಾತನಾಡಿ, ಮುಂಬರುವ ವಿಧಾನಸಭೆ ಸಾರ್ವತ್ರಿಕ ಚುನಾವಣೆಗಳಿಗಾಗಿ ಮತದಾರರಿಗೆ ವಿದ್ಯುನ್ಮಾನ ಮತ ಯಂತ್ರದ ಬಗ್ಗೆ ತಜ್ಞರಿಂದ ಮಾಹಿತಿ ನೀಡಲಾಗುತ್ತಿದ್ದು, ಎಲ್ಲಾ ಮತದಾರರು ಈ ವಿದ್ಯುನ್ಮಾನ ಯಂತ್ರದ ಮಾಹಿತಿ ಪಡೆದು ಮುಂಬರುವ ಚುನಾವಣೆಗಳಲ್ಲಿ ಕಡ್ಡಾಯವಾಗಿ ಮತದಾನ ಮಾಡುವಂತೆ ತಿಳಿಸಿದರು.

ಈ ಸಂದರ್ಭದಲ್ಲಿ ಬಾಲಾಜಿ, ರಾಜಕುಮಾರ, ದೀಪಕ ಪಾಟೀಲ, ಶಿವರಾಜ್ ಮಾನುರೆ ಸೇರಿದಂತೆ ಇತರರು ಇದ್ದರು.

Ravi Mathapati

Read More Articles
MANY DROPS MAKE AN OCEAN
Support NewsKarnataka's quality independent journalism with a small contribution.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *